ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ  ಪ್ರಕರಣ

ಸಿಂಗಟಗೆರೆ  ಪೊಲೀಸ್ ಠಾಣೆ.

ದಿನಾಂಕ:05-02-2022 ರಂದು ಸಿಂಗಟಗೆರೆ ಠಾಣಾ ಸರಹದ್ದಿನ ಚಟ್ನಹಳ್ಳಿ ಗ್ರಾಮದ ವಾಸಿ ಶಶಿಧರ .ಬಿ.ಜಿ. ಬಿನ್ ಗಂಗಾಧರಪ್ಪ   ಅಕ್ರಮವಾಗಿ ಅವರ ಮನೆಯ ಮುಂದೆ  ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಅರೋಪಿತನು ಅಕ್ರಮವಾಗಿ ಹೊಂದಿದ್ದ 180 ಎಂ.ಎಲ್. ನ 5 ಟೆಟ್ರಾಪ್ಯಾಕ್  ಮತ್ತು 90 ಎಂ.ಎಲ್. ನ 42 ಟೆಟ್ರಾಪ್ಯಾಕ್ ಮದ್ಯವನ್ನು  ಅಂದಾಜು ಬೆಲೆ 2057/- ರೂ ಅಗಿದ್ದು ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಅರೋಫಿತನ ವಿರುದ್ದ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಲೀಲಾವತಿ  ಮತ್ತು  ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ

ಕಡೂರು ಪೊಲೀಸ್ ಠಾಣೆ

ದಿನಾಂಕ:05-02-2022 ರಂದು ಕಡೂರು ಠಾಣಾ ಸರಹದ್ದಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ  ಸುನಿಲ ಸಿ.ಎಸ್. ಬಿನ್ ಸ್ವಾಮಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಅರೋಪಿತನು ಅಕ್ರಮವಾಗಿ ಹೊಂದಿದ್ದ 180 ಎಂ.ಎಲ್. ನ 7 ಟೆಟ್ರಾಪ್ಯಾಕ್  ಮತ್ತು 90 ಎಂ.ಎಲ್. ನ 20 ಟೆಟ್ರಾಪ್ಯಾಕ್  ಮದ್ಯವನ್ನು ಅಂದಾಜು ಬೆಲೆ 1319/- ರೂ ಅಗಿದ್ದು ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಅರೋಫಿತನ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ರಮ್ಯ ಎನ್.ಕೆ.  ಮತ್ತು  ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

ಜಯಪುರ ಪೊಲೀಸ್ ಠಾಣೆ

ದಿನಾಂಕ:05-02-2022 ರಂದು ರಾತ್ರಿ ಜಯಪುರ ಠಾಣಾ ಸರಹದ್ದಿನ ಕುಂದೂರಿನ ಹುಂಚಮ್ಮ ದೇವಸ್ಥಾನದ ಹತ್ತಿರ ಸಾರ್ವಜನಿಕ ಜಾಗದಲ್ಲಿ ಮಟ್ಕಾ ಜೂಜಾಟ ಆಡಿಸುತ್ತಿದ್ದ ಸುಧಾಕರ ಕುಂದೂರು ವಾಸಿ ಈತನನ್ನು ವಶಕ್ಕೆ ಪಡೆದು ಆರೋಪಿತನು ಹೊಂದಿದ್ದ  780/- ರೂ ನಗದು ಹಣವನ್ನು ಒಂದು ಮಟ್ಕಾ ಚೀಟಿ ಮತ್ತು ಒಂದು ಬಾಲ್ ಪೆನ್ನು   ಅನ್ನು ಅಮಾನತ್ತು ಪಡಿಸಿಕೊಂಡು, ಬಂದು ಅರೋಫಿತನ ವಿರುದ್ದ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಜ್ಯೋತಿ ಎನ್.ಎ  ಮತ್ತು  ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಬೀರೂರು ಪೊಲೀಸ್ ಠಾಣೆ

ದಿನಾಂಕ 05-02-2022 ರಂದು ಬೀರೂರು ಅಜ್ಜಂಪುರ ರಸ್ತೆಯಲ್ಲಿರುವ ಮುನಾವರ್ ಬಿನ್ ಬಾಷಾ ಸಾಬ್   ರವರು ನೀಡಿದ ದೂರಿನಲ್ಲಿ ಪಿರುಆದಿಯ ಬಾಬ್ತು ಅಂಗಡಿಯನ್ನು ದಿನಾಂಕ 02/02/2022 ರಂದು ಬೀಗ ಹಾಕಿಕೊಂಡು ಹೋಗಿದ್ದು ದಿನಾಂಕ:05/02/2022 ರಂದು ನೋಡಿದಾಗ ಯಾರೋ ಕಳ್ಳರು ಅಂಗಡಿಯ ಬೀಗ ಹೊಡೆದು ಅಂಗಡಿಯಲ್ಲಿದ್ದ 8 ಸಬ್ ಮರ್ಸಿಬಲ್ ಮೋಟಾರ್, 09 ಸಬ್ ಮರ್ಸಿಬಲ್ ರೋಟರ್, 350 ಕೆ.ಜಿ ವೈಂಡಿಂಗ್ ವೈರ್ ಮತ್ತು 90 ಕೆ.ಜಿ ಕಾಫರ್ ವೈರ್ ನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು  ಇವುಗಳ ಅಂದಾಜು ಬೆಲೆ 1,45,000/- ರೂ ಗಳಾಗಿದ್ದು  ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಸ್ವತ್ತುಗಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

 

ಇತ್ತೀಚಿನ ನವೀಕರಣ​ : 06-02-2022 01:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080