ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ .

 ಬೀರೂರು ಪೊಲೀಸ್ ಠಾಣೆ.

ದಿನಾಂಕ 14/06/2021 ರಂದು ಬೀರೂರು ಠಾಣಾ ವ್ಯಾಪ್ತಿಯ ಬಿ.ಕೆ.ಹೊಸೂರು ಗ್ರಾಮದ ಅಂಗನವಾಡಿ ಮುಂಭಾಗ ಯಾರೋ ಇಬ್ಬರು ಆಸಾಮಿಗಳು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು, ನಮ್ಮಗಳನ್ನು  ನೋಡಿ ಇಬ್ಬರು ಮದ್ಯ  ಮಾರಾಟ ಮಾಡುತ್ತಿದ್ದ ಇಬ್ಬರು ಆಸಾಮಿಗಳು ಓಡಿಹೋಗಿದ್ದು  ಅವರುಗಳು ಬಿಟ್ಟುಹೋಗಿದ್ದ ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್.ನ  ರಾಜಾವಿಸ್ಕಿಯ 70  ಮದ್ಯದಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 2450/- ರೂ ಅಗಿದ್ದು ಓಡಿಹೋದ ಆಸಾಮಿಗಳ ಹೆಸರು ವಿಳಾಸ ತಿಳಿಯಲಾಗಿ ಜಗದೀಶ@ ಜಗ್ಗ ಬಿನ್ ಗೋವಿಂದಪ್ಪ, ಮಂಜುನಾಥ @ಮಂಜು ಬಿನ್ ಹನುಮಂತಪ್ಪ , ಬಿ.ಕೆ.ಹೊಸೂರು ಗ್ರಾಮ ವಾಸಿಗಳಾಗಿದ್ದು ಆರೋಪಿತರುಗಳ ವಿರುದ್ದ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ.ವಿಶ್ವನಾಥ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಬೀರೂರು ಪೊಲೀಸ್ ಠಾಣೆ.

ದಿನಾಂಕ 14/06/2021 ರಂದು ಬೀರೂರು ಠಾಣಾ ವ್ಯಾಪ್ತಿಯ ಅಜ್ಜಂಪುರ ರಸ್ತೆಯ ಬಿ.ಸಿ.ಚಿಕನ್ ಸೆಂಟರ್ ಬಳಿ ಶೃಂಗಾರ್ ಚಿತ್ರ ಮಂದಿರಕ್ಕೆ ಹೋಗುವ ರಸ್ತೆ ಕ್ರಾಸ್ ಬಳಿ ಯಾರೋ ಒಬ್ಬ ಆಸಾಮಿಯು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು, ಆರೋಪಿಯಾದ ವಸಂತಪ್ಪ ಬಿನ್ ಲೇಟ್ ರಂಗಪ್ಪ, ಮೇಲನಹಳ್ಳಿ ವಾಸಿಯಾಗಿದ್ದು ,ಆತನ ಬಳಿಯಿದ್ದ  ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್.ನ  ರಾಜಾವಿಸ್ಕಿಯ 48  ಮದ್ಯದಪೌಚ್ಗಳಿದ್ದು, ಮದ್ಯದ ಅಂದಾಜು ಬೆಲೆ 1680 /- ರೂ ಅಗಿದ್ದು ಆರೋಪಿತನ ವಿರುದ್ದ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿಎಸ್ಐ. ಬಸವರಾಜು  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಅಕ್ರಮ ಜೂಜಾಟ  ಪ್ರಕರಣ

ತರೀಕೆರೆ   ಪೊಲೀಸ್ ಠಾಣೆ

ದಿನಾಂಕ 14/06/2021 ರಂದು ತರೀಕೆರೆ ಟೌನ್ ವಿ.ಐ.ಎಲ್ ಪ್ಯಾಕ್ಟರಿಯ ಮುಂಭಾಗದಲ್ಲಿರುವ ಗೋವಿಂದಪ್ಪರವರ ಶೆಡ್ ಬಳಿ ಖಾಲಿ ಜಾಗದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟವಾಡುತ್ತಿದ್ದಾರೆಂದು ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ತರೀಕೆರೆ ಟೌನ್ ವಿ.ಐ.ಎಲ್ ಪ್ಯಾಕ್ಟರಿಯ ಮುಂಭಾಗದಲ್ಲಿರುವ ಗೋವಿಂದಪ್ಪರವರ ಶೆಡ್ಬಳಿ ಖಾಲಿ ಜಾಗದಲ್ಲಿ  ಅಕ್ರಮವಾಗಿ ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ 5 ಜನ ಆರೋಪಿಗಳ ಮೇಲೆ ದಾಳಿ ಮಾಡಿದ್ದು 1) ಸುರೇಶ 2) ಮುನೀರ್ 3)ದಿನೇಶ್ 4)ಬಸವರಾಜ್ 5)ಇಸ್ಮಾಯಿಲ್ರವರುಗಳನ್ನು ವಶಕ್ಕೆ ಪಡೆದಿದ್ದು , ಆರೋಪಿತರುಗಳ ವಶದಲ್ಲಿದ್ದ ಒಂದು ಪ್ಲಾಸ್ಟಿಕ್ ಚೀಲ .52 ಇಸ್ಪೀಟ್ ಎಲೆಗಳು ಹಾಗೂ 9.140 /-ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತರುಗಳ ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ.ರಾಘವೇಂದ್ರಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-06-2021 06:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080