ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ 28-07-2021 ರಂದು ಬೆಳಿಗ್ಗೆ 6-30 ಗಂಟೆ ಸಮಯದಲ್ಲಿ ಪೌರಕಾರ್ಮಿಕರಾದ ಮಧುರವರು ಅಜ್ಜಂಪುರ ಪಟ್ಟಣದ  ಶೆಟ್ರುಸಿದ್ದಪ್ಪರವರ ಕಾಲೇಜಿನ ಆಟದ ಮೈದಾನದಲ್ಲಿರುವ ರಂಗಮಂದಿರದ ಬಳಿ ಕಸಗುಡಿಸುತ್ತಿರುವಾಗ ರಂಗಮಂದಿರದ ಒಳಗಡೆ ಕಲ್ಲೇಶ್ವರ ಗೊಬ್ಬರದ ಅಂಗಡಿ ಹಾಗೂ ಅಲ್ಲಿ ಇಲ್ಲಿ ಗಾರೆಕೆಲಸ ಮಾಡಿಕೊಂಡಿದ್ದ ಕೋಲಾರದ ಕಡೆಯವನಾದ 35 ವರ್ಷ ವಯಸ್ಸಿನ ಚೆಲುವ @ವೆಂಕಟಾಚಲಪತಿಯವರನ್ನು  ದಿನಾಂಕ27-07-2021 ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾರೋ ದುರಾತ್ಮರು ಯಾವುದೋ ಉದ್ದೇಶದಿಂದ ಬಲವಾದ ಆಯುಧದಿಂದ ಹೊಡೆದು ಕೊಲೆ ಮಾಡಿರುತ್ತಾರೆಂದು ನೀಡಿದ ದೂರಿನನ್ವಯ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಪಘಾತ ಪ್ರಕರಣ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ 26-07-2021 ರಂದು  ರಾತ್ರಿ  ಸುಮಾರು 09-05 ಗಂಟೆ ಸಮಯದಲ್ಲಿ ಮಂಜುನಾಥರವರು  ತರೀಕೆರೆಯ ಲಕ್ಷ್ಮೀ ಸೈಕಲ್ ಶಾಪ್ ಹತ್ತಿರ ಕೆಎ-18 ಇಸಿ- 8617 ಬೈಕಿನಲ್ಲಿ ಹೋಗುತ್ತಿದ್ದಾಗ ಮಂಜುನಾಥರವರು ತಮ್ಮ ಟಿವಿಎಸ್ ನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಂಜುನಾಥರವರ ಬಲಗೈಗೆ ಪೆಟ್ಟಾಗಿದ್ದು ಈ ಬಗ್ಗೆ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ  ಕೈಗೊಂಡಿರುತ್ತಾರೆ.

ಅಕ್ರಮ ಜೂಜಾಟ ಪ್ರಕರಣ.

ಅಜ್ಜಂಫುರ ಪೊಲೀಸ್ ಠಾಣೆ .

ದಿನಾಂಕ 26-07-2021 ರಂದು ತಿಪ್ಪಗೊಂಡನಹಳ್ಳಿಯಿಂದ ಹಣ್ಣೆಗುಡ್ಡಕ್ಕೆ ಹೋಗುವ ಬಂಡಿ ದಾರಿಯ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ್ದು  6 ಜನರನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ ಒಂದು ಪಿಂಕ್ ಬಣ್ಣದ ಟವಲ್, 52ಇಸ್ಪೀಟ್ ಎಲೆಗಳು ಹಾಗೂ ನಗದು ಹಣ 24,420/ರೂ ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿತರುಗಳ ವಿರುದ್ದ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲ್ಲಿ ಪಿ.ಎಸ್.ಐ. ತಿಪ್ಪೇಶ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಕೊಲೆ ಪ್ರಯತ್ನ ಪ್ರಕರಣ.

ಬಾಳೂರು ಪೊಲೀಸ್ ಠಾಣೆ

ದಿನಾಂಕ 27-07-2021 ರಂದು ವಾಟೇಖಾನ್ ಗ್ರಾಮದ ಅರುಣ್ ಕುಮಾರನು ತನ್ನ ತಂದೆ ಲಕ್ಷ್ಣಣ ಹಾಗೂ ತಾಯಿ ಯಮುನಾರವರ ಬಳಿ ಕುಡಿಯಲು ಹಣ ಕೇಳಿದ್ದು ಹಣವನ್ನು  ಕೊಡದ ವಿಚಾರಕ್ಕೆ  ಮನೆಯಲ್ಲಿದ್ದ ಕತ್ತಿಯನ್ನು ತೆಗೆದುಕೊಂಡು ಬಂದು ಕೊಲೆ ಮಾಡುವ ಉದ್ದೇಶದಿಂದ ಲಕ್ಷ್ಣಣ ಮತ್ತು ಯಮುನಾರವರಿಗೆ ಕತ್ತಿಯನ್ನು ತಲೆಗೆ ಬೀಸಿದ್ದಲ್ಲದೆ, ಕತ್ತಿಯನ್ನು ಉಲ್ಟಾ ಮಾಡಿಕೊಂಡು ತಲೆಯ ಬಲಬಾಗಕ್ಕೆ ಹೊಡೆದು ರಕ್ತಗಾಯವನ್ನುಂಟು ಮಾಡಿರುತ್ತಾನೆ.  ಆರೋಪಿ ಅರುಣ್ ಕುಮಾರ್ ವಿರುದ್ದ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 28-07-2021 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080