ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಲಿಂಗದಹಳ್ಳಿ ಪೊಲೀಸ್ ಠಾಣೆ.

ದಿನಾಂಕ 29-09-2021 ರಂದು ನಂದಿಬಟ್ಟಲು ಕಾಲೀನಿ ವಾಸಿಯಾದ ಸ್ವಾಮಿ ಬಿನ್ ಸೇನ್ಯಾನಾಯ್ಕ ರವರು ನೀಡಿದ ದೂರಿನ ಸಾರಾಂಶವೇನೆಂದರೆ, ನನ್ನ ತಂದೆ ತಾಯಿಗೆ 6 ಜನ ಮಕ್ಕಳಿದ್ದು , ನಾನು ಚಿಕ್ಕಮಗಳೂರಿನಲ್ಲಿ ಕಲೆಸ ಮಾಡಿಕೊಂಡಿದ್ದು ನನ್ನ ತಂಗಿ ಪಲ್ಲವಿ, 18 ವರ್ಷ ಈಕೆಯು ಅಜ್ಜಿಯೊಂದಿಗೆ ವಾಸವಾಗಿದ್ದು ,ಲಿಂಗದಹಳ್ಳಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುತ್ತಾಳೆ. ದಿನಾಂಕ 28-09-2021 ರಂದು ಬೆಳಗ್ಗೆ ಕಾಲೇಜಿಗೆ ಹೋಗಿ ಬರುತ್ತೇನೆಂದು ಅಜ್ಜಿಗೆ ಹೇಳಿ ಹೋದವಳು ಮನೆಗೆ ವಾಪಾಸ್ ಬಂದಿರುವುದಿಲ್ಲ. ಪರಿಚಯಸ್ಥರ, ಸಂಬಂಧಿಕರ ಹಾಗೂ ಆಕೆಯ ಸ್ನೇಹಿತರುಗಳಲ್ಲಿ ವಿಚಾರ ಮಾಡಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ, ಆದ್ದರಿಂದ ನನ್ನ ತಂಗಿ ಪಲ್ಲವಿಯನ್ನು ಪತ್ತೆಮಾಡಿಕೊಡಬೇಕೆಂದು ನೀಡಿದ ದೂರಿನ ಮೇರೆಗೆ ಲಿಂಗದಹಳ್ಳಿ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

 

ಅಕ್ರಮ ಮರಳು ಕಳ್ಳತನ ಪ್ರಕರಣ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ:28-09-2021 ರಂದು ಬೆಳಿಗ್ಗೆ 08-45 ಗಂಟೆ ಸಮಯದಲ್ಲಿ ಉದುಸೆ ಗ್ರಾಮದ ಯು.ಡಿ.ಜಗದೀಶ್ ರವರ ಮನೆಯ ಮುಂದೆ ಸುಮಾರು 4 ಟ್ರಾಕ್ಟರ್ ನಷ್ಟು ಮರಳನ್ನು  ಹೇಮಾವತಿ ಹೊಳೆಯಿಂದ ಕಳ್ಳತನ ಮಾಡಿ ಸಾಗಾಟ ಮಾಡುವ ಉದ್ದೇಶದಿಂದ ಮನೆಯ ಮುಂದೆ ಸ್ಟಾಕ್ ಮಾಡಿದ್ದು, ಅಕ್ರಮವಾಗಿ ಯಾವುದೇ ಪರವಾನಗಿಯನ್ನು ಹೊಂದದೆ, ಸರ್ಕಾರದ ಸ್ವತ್ತಾದ ಮರಳನ್ನು ಕಳ್ಳತನ ಮಾಡಿ ಸ್ಟಾಕ್ ಮಾಡಿದ್ದ ಯು.ಡಿ.ಜಗದೀಶ್ ಬಿನ್ ದೊಡ್ಡೇಗೌಡ, ಉದುಸೆ ಗ್ರಾಮ ವಾಸಿ ಇವರ ವಿರುದ್ದ ಗೋಣಿಬೀಡು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ, ಧನಂಜಯ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 29-09-2021 07:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080